ಬೆಂಗಳೂರು: ದಾಖಲೆ ರಹಿತ ಹಣ ಹೊಂದಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾದಾಗ ಡಿಕೆ ಶಿವಕುಮಾರ್ಗೆ ಎದೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೋಮವಾರ ಮಧ್ಯರಾತ್ರಿ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಡಿಕೆಶಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂರು ದಿನಗಳ ಕಾಲ ಅವರು ಆಸ್ಪತ್ರೆಯಲ್ಲೇ ಇರಲಿದ್ದಾರೆ ಎನ್ನಲಾಗಿದೆ. ಜೈಲಿನಲ್ಲಿದ್ದಾಗ ಡಿಕೆಶಿ ಕೆಲಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು.
ಅಕ್ಟೋಬರ್ ಕೊನೆಯ ವಾರದಲ್ಲಿ ಡಿಕೆಶಿ ಜೈಲಿನಿಂದ ಹೊರ ಬಂದಿದ್ದರು. ನಂತರ ಆಸ್ಪತ್ರೆಗೆ ತೆರಳಿ ಬಿಪಿ, ಶುಗರ್ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದರು. ಎರಡು ದಿನಗಳ ಆಸ್ಪತ್ರೆಯಲ್ಲೇ ಇರಬೇಕು ಎಂದು ವೈದ್ಯರು ಹೇಳಿದ್ದರು. ಆದರೆ, ಕನಕಪುರಕ್ಕೆ ಹೋಗುವ ಸಲುವಾಗಿ ಡಿಕೆಶಿ ಡಿಸ್ಚಾರ್ಜ್ ಆಗಿದ್ದರು. ಈಗ ಅವರಿಗೆ ಮತ್ತೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಅವರ ಬೆಂಬಲಿಗರಲ್ಲಿ ಆತಂಕ ಮೂಡಿಸಿದೆ.ಇನ್ನೂ ಡಿಕೆ ಶಿವಕುಮಾರ್ ಅವರ ಭೇಟಿಗೆ ಯಾರು ಬರದಂತೆ ಅವರ ಕುಟುಂಬಸ್ಥರು ಮನವಿ ಮಾಡಿದ್ದಾರೆ. (KANNADA PRABHA)